ಗಂಗೊಳ್ಳಿ: ಸಮುದ್ರದಲ್ಲಿ ಮುಳುಗಿ ಮೀನುಗಾರ ಮೃತ್ಯು

Update: 2022-09-23 11:13 GMT

ಕುಂದಾಪುರ, ಸೆ.23: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರೊಬ್ಬರು ಕಡಲಿನ ಅಲೆಗಳ ಅಬ್ಬರದಿಂದ ಕೊಚ್ಚಿ ಹೋದ ಘಟನೆ ಗುರುವಾರ ಸಂಜೆ ನಡೆದಿದ್ದು, ಶುಕ್ರವಾರ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿಯ ಮಲ್ಯರಬೆಟ್ಟು ನಿವಾಸಿ ವೆಂಕಟೇಶ್ ಖಾರ್ವಿ (47) ಮೃತ ಮೀನುಗಾರ. ಗಂಗೊಳ್ಳಿ ಬ್ರೇಕ್‌ವಾಟರ್ ಬಳಿಯ ಬೇಲಿಕೇರಿ ಬಂದರು ಸಮೀಪ ಈ ದುರ್ಘಟನೆ ನಡೆದಿತ್ತು.

ವೆಂಕಟೇಶ್ ಮೀನುಗಾರಿಕೆ ನಡೆಸುತ್ತಿದ್ದು, ಗುರುವಾರ ಮರ ಬಲೆ ಹಾಕಿ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಅಲೆಯ ಅಬ್ಬರಕ್ಕೆ ಸಿಕ್ಕು ಸಮುದ್ರ ಪಾಲಾಗಿದ್ದರು. ಶುಕ್ರವಾರ ಬೆಳಗ್ಗೆ ಅವರ ಮೃತದೇಹ ಬೇಲಿಕೇರಿ ಬಳಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

ಗಂಗೊಳ್ಳಿ ಆಪತ್ಬಾಂಧವ 24X7 ಆಂಬುಲೆನ್ಸ್ ಮೂಲಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಯಿತು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News