ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಕಡೂರಿನ ವಿದ್ಯಾರ್ಥಿನಿಯ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

Update: 2022-09-23 16:26 GMT
ರಕ್ಷಿತಾ ಬಾಯಿ - ವಿದ್ಯಾರ್ಥಿನಿ

ಚಿಕ್ಕಮಗಳೂರು, ಸೆ.23: ಬಸ್ಸನಿಂದ ಬಿದ್ದ ಪರಿಣಾಮ ಮೆದುಳು ನಿಷ್ಕ್ರಿಯಗೊಂಡು ಬಹು ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಕಡೂರು ಕಡೂರು ತಾಲೂಕು ಸೋಮನಹಳ್ಳಿಯ ವಿದ್ಯಾರ್ಥಿನಿ ರಕ್ಷಿತಾ ಬಾಯಿಯ ಕುಟುಂಬಕ್ಕೆ ರಾಜ್ಯ ಸರಕಾರ ಒಟ್ಟು 8 ಲಕ್ಷ ರೂ. ಪರಿಹಾರ ಘೋಷಿಸಿದೆ.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5ಲಕ್ಷ ರೂ., ತಾಂಡ್ಯ ಅಭಿವೃದ್ಧಿ ನಿಗಮದಿಂದ 1ಲಕ್ಷ ರೂ. ಹಾಗೂ ಉದ್ಯಮಶೀಲತೆ ಯೋಜನೆಯಡಿ 2ಲಕ್ಷ ರೂ. ಸೇರಿಂದತೆ 8ಲಕ್ಷ ರೂ. ಪರಿಹಾರವನ್ನು ವಿದ್ಯಾರ್ಥಿನಿ ಕುಟುಂಬಕ್ಕೆ ಸರಕಾರದಿಂದ ಘೋಷಣೆ ಮಾಡಲಾಗಿದೆ.

ತಾಂಡ್ಯ ಅಭಿವೃದ್ಧಿ ನಿಗಮ ಹಾಗೂ ಉದ್ಯಮಶೀಲತೆ ಯೋಜನೆಯಡಿಯಲ್ಲಿ ಕುಡಚಿ ಶಾಸಕ ಪಿ.ರಾಜೀವ್ ಕಡೂರು ತಾಲೂಕು ಸೋಮನಹಳ್ಳಿ ತಾಂಡ್ಯಕ್ಕೆ ಭೇಟಿನೀಡಿ ಚೆಕ್ ವಿತರಣೆ ಮಾಡಲಿದ್ದಾರೆ ಎಂದು  ತಿಳಿದು ಬಂದಿದೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News