ಸುರತ್ಕಲ್ ನಲ್ಲಿ ರಾ.ಹೆದ್ದಾರಿ ತಡೆದು ಪ್ರತಿಭಟನೆ‌‌: ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

Update: 2022-09-23 17:14 GMT

ಸುರತ್ಕಲ್, ಸೆ.23: ಸುರತ್ಕಲ್ ನಲ್ಲಿ ರಾ.ಹೆದ್ದಾರಿ ತಡೆದು ಪ್ರತಿಭಟನೆ‌‌ ಮಾಡಿದ್ದ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ವಿರುದ್ಧ ಸುರತ್ಕಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಎಸ್ ಡಿ ಪಿ ಐ , ಪಿಎಫ್ ಐ ನಾಯಕರ‌ ಮನೆ ಹಾಗೂ ಕಚೇರಿಗಳ ಮೇಲೆ ಎನ್ಐಎ ದಾಳಿ ಮಾಡಿ ಕೆಲವರನ್ನು ವಶಕ್ಕೆ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರು ಸುರತ್ಕಲ್‌ ಗೋವಿಂದದಾಸ‌ ಕಾಲೇಜು ಬಳಿ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ವಾಹನಗಳನ್ನು ತಡೆದು ಹೆದ್ದಾರಿಯಲ್ಲಿ ಪ್ರತಿಭಟನೆ ಎನ್ಐಎ ವಿರುದ್ಧ ಘೋಷಣೆ ಕೂಗಿದ್ದರು.

ಮಧ್ಯಾಹ್ನ ಸುಮಾರು 12-30ರಿಂದ 12-40ರ ವರೆಗಿನ 10 ನಿಮಿಷಗಳ ಕಾಲ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳಿಗೆ, ಅಡ್ಡಿ ಅಡಚನೆಯನ್ನು ಉಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿ ಸುರತ್ಕಲ್ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಸೊಮೊಟೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News