ಕಾಸರಗೋಡು | ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರುಪಾಲು
Update: 2022-09-24 05:33 GMT
ಕಾಸರಗೋಡು, ಸೆ.24: ಹೊಳೆಗೆ ಸ್ನಾನಕ್ಕಿಳಿದ ಯುವಕನೋರ್ವ ಆಕಸ್ಮಿಕವಾಗಿ ನೀರುಪಾಲಾದ ಘಟನೆ ಶುಕ್ರವಾರ ಸಂಜೆ ಪಡನ್ನಕ್ಕಾಡ್ ನಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಅಪ್ಪು ನೀರುಪಾಲಾದ ಯುವಕ. ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರ ಜೊತೆ ಕಾಸರಗೋಡಿಗೆ ಬಂದಿದ್ದ ಅಪ್ಪು ಶುಕ್ರವಾರ ಸಂಜೆ ಸ್ನೇಹಿತರ ಜೊತೆ ಹೊಳೆಗೆ ಸ್ನಾನಕ್ಕಿಳಿದಿದ್ದ ಎನ್ನಲಾಗಿದೆ.
ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡ ಹೋದ ಅಪ್ಪು ನಾಪತ್ತೆಯಾಗಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು , ನಾಗರಿಕರು ಶೋಧ ನಡೆಸುತ್ತಿದ್ದಾರೆ.
ಇದನ್ನೂ ಓದಿ: ವಿದಾಯದ ಪಂದ್ಯವನ್ನಾಡಿದ ರೋಜರ್ ಫೆಡರರ್; ಸ್ವಿಸ್ ಸ್ಟಾರ್ ಜೊತೆ ಕಣ್ಣೀರಿಟ್ಟ ರಫೆಲ್ ನಡಾಲ್