ಉತ್ತರಾಖಂಡ: ಯುವತಿಯ ಹತ್ಯೆ, ಪ್ರಮುಖ ಆರೋಪಿಯ ತಂದೆ, ಸಹೋದರನನ್ನು ಉಚ್ಚಾಟಿಸಿದ ಬಿಜೆಪಿ

Update: 2022-09-24 08:59 GMT
Photo:PTI

ಹೊಸದಿಲ್ಲಿ: ಬಿಜೆಪಿಯ ಹಿರಿಯ ಮುಖಂಡನೊಬ್ಬನ ಪುತ್ರ ಯುವತಿಯೊಬ್ಬಳನ್ನು ಹತ್ಯೆಗೈದ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪ್ರಮುಖ ಆರೋಪಿ ಪುಲ್ಕಿತ್ ಆರ್ಯನ ತಂದೆ ಹಾಗೂ ಸಹೋದರನನ್ನು ಬಿಜೆಪಿ ಶನಿವಾರ ಉಚ್ಚಾಟಿಸಿದೆ ಎಂದು ವರದಿಯಾಗಿದೆ.

ಆರೋಪಿ ಪುಲ್ಕಿತ್ ಆರ್ಯ ಬಂಧನದ ನಂತರ ಪುಲ್ಕಿತ್ ತಂದೆ, ಬಿಜೆಪಿ ಮುಖಂಡ ವಿನೋದ್ ಆರ್ಯ ಹಾಗೂ  ಪಕ್ಷದ ಸದಸ್ಯರಾಗಿದ್ದ ಆರೋಪಿಯ ಸಹೋದರ ಅಂಕಿತ್ ಆರ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಪ್ರಮುಖ ಆರೋಪಿ ಪುಲ್ಕಿತ್ ಆರ್ಯನ ತಂದೆ ವಿನೋದ್ ಆರ್ಯ ಉತ್ತರಾಖಂಡದ ಮತಿ ಕಲಾ ಮಂಡಳಿಯ ಮಾಜಿ ಅಧ್ಯಕ್ಷರಾಗಿ ರಾಜ್ಯ ಸಚಿವ ಸ್ಥಾನವನ್ನು ಹೊಂದಿದ್ದರು. ಪುಲ್ಕಿತ್ ಆರ್ಯನ ಸಹೋದರ ಅಂಕಿತ್ ಆರ್ಯ ಉತ್ತರಾಖಂಡ ಇತರೆ ಹಿಂದುಳಿದ ವರ್ಗಗಳ ಆಯೋಗದ ಉಪಾಧ್ಯಕ್ಷ ಸ್ಥಾನದಿಂದ ರಾಜ್ಯ ಸರಕಾರದಿಂದ ಬಿಡುಗಡೆ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News