ಕುವೈತ್‌ನಲ್ಲಿ ರಸ್ತೆ ಅಪಘಾತ: ಮಂಗಳೂರಿನ ಯುವಕ ಮೃತ್ಯು

Update: 2022-09-24 13:31 GMT
ಆಸೀಫ್ ಪಕ್ಕಲಡ್ಕ

ಮಂಗಳೂರು, ಸೆ.24: ಕುವೈ‌ತ್ ನಲ್ಲಿ ಶುಕ್ರವಾರ ನಡೆದ ರಸ್ತೆ ಅಪಘಾತವೊಂದರಲ್ಲಿ ನಗರದ ಪಡೀಲ್ ಸಮೀಪದ ಬಜಾಲ್ ಪಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಮೃತಪಟ್ಟಿದ್ದಾರೆ.‌

ಮೃತರು ಪತ್ನಿ, ತಾಯಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಕುವೈತ್ ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮ್ಯಾನ್ ಆಗಿದ್ದ ಆಸೀಫ್ ಪಕ್ಕಲಡ್ಕ ಶುಕ್ರವಾರ ಸಂಜೆ ಕೆಲಸ ಮುಗಿಸಿ ತನ್ನ ರೂಮಿಗೆ ಬೈಕ್‌ನಲ್ಲಿ ಮರಳುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಆಸೀಫ್ ಪಕ್ಕಲಡ್ಕ ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News