ಭಟ್ಕಳ: ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಿಯ ಬಂಧನ

Update: 2022-09-25 10:11 GMT

ಭಟ್ಕಳ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಯಚರಣೆ ನಡೆಸಿದ ಭಟ್ಕಳ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ ನೇತೃತ್ವದ ತಂಡ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. 

ಹೆಬಳೆ ಪಂಚಾಯತ್ ವ್ಯಾಪ್ತಿಯ ತಲ್ಹಾ ಸ್ಟ್ರೀಟ್ ನಿವಾಸಿ ಸಯ್ಯದ್ ಮೂಸಾ ಎಂದು ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಗುಳ್ಮಿ ಕ್ರಾಸ್ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನಾಧರಿಸಿ ಈ ದಾಳಿ ನಡೆದಿದೆ. 

ಬಂಧಿತ ಆರೋಪಿ, ಅಕ್ರಮವಾಗಿ ಒಟ್ಟು ಸುಮಾರು 2,500 ರೂಪಾಯಿ ಬೆಲೆಬಾಳುವ 209 ಗ್ರಾಂ ತೂಕದ ಒಣಗಿದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾಗ ನಗದು ಹಣ 200 ರೂಪಾಯಿ ಸಮೇತ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಭಟ್ಕಳ ಗ್ರಾಮೀಣ ಠಾಣೆಯ ಪಿ.ಎಸ್.ಐ ಭರತ್ ಪ್ರಕರಣ ದಾಖಕಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

ದಾಳಿಯ ಸಂದರ್ಭದಲ್ಲಿ ಪಿ.ಎಸ್.ಐ ಭರತ್, ಭಟ್ಕಳ ಗ್ರಾಮೀಣ ಠಾಣೆ ಹವಾಲ್ದಾರ್ ದೀಪಕ್ ನಾಯ್ಕ, ಪ್ರಭಾರ ಕಂದಾಯ ನಿರೀಕ್ಷಕ ಶಂಭು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News