ಪಡುಬಿದ್ರೆ: 325 ಮಂದಿಗೆ 3.75 ಲಕ್ಷ ರೂ. ಪ್ರತಿಭಾ ಪುರಸ್ಕಾರ ವಿತರಣೆ

Update: 2022-09-25 14:12 GMT

ಪಡುಬಿದ್ರೆ, ಸೆ.25: ಪುಷ್ಪಾನಂದ ಫೌಂಡೇಶನ್ ವತಿಯಿಂದ ಪಡುಬಿದ್ರೆ, ಹೆಜಮಾಡಿ, ಪಲಿಮಾರು, ಎಲ್ಲೂರು, ಬೆಳಪು, ತೆಂಕ ಮತ್ತು ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ 325 ವಿದ್ಯಾರ್ಥಿಗಳಿಗೆ 3.75 ಲಕ್ಷ ರೂ. ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವನ್ನು ಎರ್ಮಾಳ್ ಜನಾರ್ದನ ದೇವಸ್ಥಾನದ ಜನಾರ್ದನ ಜನ ಕಲ್ಯಾಣ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಜನಾರ್ದನ ಜನ ಕಲ್ಯಾಣ ಸೇವಾ ಸಮಿತಿಯ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ಉದ್ಘಾಟಿ ಸಿದರು. ಮುಖ್ಯ ಅತಿಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ  ಮಾತನಾಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಪುಷ್ಪನಂದ ಫೌಂಡೇಶನ್ ಪ್ರವರ್ತಕ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ಫೌಂಡೇಶನ್ ಮೂಲಕ ಕಾಪು ವಿಧಾನ ಸಭಾ ಕ್ಷೇತ್ರದ 26 ಗ್ರಾಪಂ ಮತ್ತು ಪುರಸಭೆ ವ್ಯಾಪ್ತಿಯ ಸುಮಾರು 1500 ವಿದ್ಯಾರ್ಥಿ ಗಳಿಗೆ 15 ಲಕ್ಷ ರೂ. ವೆಚ್ಚದಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಲು ಯೋಜನೆ ರೂಪಿಸಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಮುಂಬಯಿ ಉತ್ತರ ಬಿಜೆಪಿ ಉಪಾಧ್ಯಕ್ಷ ಹರೀಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಕೇಸರಿ ಯುವರಾಜ್, ತಾಪಂ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಜಿಪಂ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರೆ, ಹೆಜಮಾಡಿ ಗ್ರಾಪಂ ಅಧ್ಯಕ್ಷ ಪಾಂಡು ರಂಗ, ಪಲಿಮಾರು ಗ್ರಾಪಂ ಅಧ್ಯಕ್ಷೆ ಗಾಯತ್ರಿ ಪ್ರಭು, ತೆಂಕ ಗ್ರಾಪಂ ಅಧ್ಯಕ್ಷೆ ಕಸ್ತೂರಿ ಪ್ರವೀಣ್, ಬಡಾ ಗ್ರಾಪಂ ಉಪಾಧ್ಯಕ್ಷ ಶಕುಂತಳ, ಪಡುಬಿದ್ರೆ ಸಿಎ ಬ್ಯಾಂಕ್ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಉದ್ಯಮಿ ಕಿಶೋರ್ ಶೆಟ್ಟಿ, ಜೇಸಿಐ ಪಡುಬಿದ್ರಿ ಅಧ್ಯಕ್ಷ ಶರತ್ ಶೆಟ್ಟಿ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಮಟ್ಟು ಯತೀಶ್ ಕೋಟ್ಯಾನ್ ಕಾರ್ಯ ಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News