ಹುಬ್ಬಳ್ಳಿ | ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ ಆರೋಪ: 11 ಮಂದಿ ವಿರುದ್ಧ ಪ್ರಕರಣ ದಾಖಲು

Update: 2022-09-25 15:24 GMT
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ, ಸೆ.25: ಮಂಡ್ಯ ಮೂಲದ ವ್ಯಕ್ತಿಯೋರ್ವರಿಗೆ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ 11 ಮಂದಿ ವಿರುದ್ಧ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ನಯಾಝ್ ಪಾಷಾ ಸೇರಿ ಹನ್ನೊಂದು ಮಂದಿ ವಿರುದ್ಧ ಮಂಡ್ಯದ ಶ್ರೀಧರ್ ಎಂಬುವರು ದೂರು ನೀಡಿದ್ದಾರೆ*. ಮೇ ತಿಂಗಳಿನಲ್ಲಿ ಶ್ರೀಧರ್ ಎನ್ನುವವರನ್ನು ಬೆಂಗಳೂರಿಗೆ ಕರೆದೊಯ್ದ ಆರೋಪಿಗಳು, ಇಲ್ಲಿನ ಬನಶಂಕರಿಯಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರು ಎನ್ನಲಾಗಿದೆ. ನಂತರ ಅವರಿಗೆ ತಮ್ಮ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿದ್ದಾರೆ. ಅಲ್ಲಿಂದ ತಿರುಪತಿಗೆ ಕರೆದೊಯ್ದು, ತಮ್ಮ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿದ್ದಾರೆ ಎಂದು ದೂರಲಾಗಿದೆ.

ಶ್ರೀಧರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸೆ. 21ರಂದು ಹುಬ್ಬಳ್ಳಿಯ ಬೈರಿದೇವರಕೊಪ್ಪಕ್ಕೆ ಬಂದಾಗ, ಅಪರಿಚಿತರು ಅವರ ಮೇಲೆ ಹಲ್ಲೆ ನಡೆಸಿದ್ದರು. ಕಿಮ್ಸ್‍ನಲ್ಲಿ ಚಿಕಿತ್ಸೆ ಪಡೆದ ಅವರು, ಈ ಹಿಂದಿನ ಘಟನೆಯಿಂದ ಬೇಸತ್ತು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News