ಮಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲರಿಗೆ ಸ್ವಾಗತ

Update: 2022-09-25 16:18 GMT

ಮಂಗಳೂರು, ಸೆ.25: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ಹಾಲಿ ಶಾಸಕ ಎಂಬಿ ಪಾಟೀಲ ಸೋಮವಾರ ನಗರದಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರವಿವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ವೇಳೆ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್‌ರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಎಂಬಿ ಪಾಟೀಲರನ್ನು ಸ್ವಾಗತಿಸಿದರು.

ಈ ಸಂದರ್ಭ ಮಾಜಿ ಸಚಿವರಾದ ಬಿ ರಮಾನಾಥ್ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆಆರ್ ಲೋಬೊ, ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಆಲಿ ಮುಲ್ಕಿ, ಮಿಥುನ್ ರೈ, ಮಾಜಿ ಮೇಯರ್ ಕವಿತಾ ಸನಿಲ್, ಮುಖಂಡರಾದ ಎಪಿ ಬಸವರಾಜ್, ಮುಹಮ್ಮದ್ ಅಲ್ತಾಫ್, ಶುಭೋದಯ ಆಳ್ವಾ, ಖಾದರ್ ಏರ್ಪೋರ್ಟ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News