ಶಿವಮೊಗ್ಗ: ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಮೃತ್ಯು

Update: 2022-09-26 05:16 GMT
ಅಕ್ಷಯ್ - ಮೃತ ಮಗು 

ಶಿವಮೊಗ್ಗ: ಹನ್ನೊಂದು ತಿಂಗಳ ಮಗುವೊಮದು ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ (ರವಿವಾರ) ಘಟನೆ ನಡೆದಿದ್ದು, ಮೃತ ಮಗು ಛಾಯಾಗ್ರಾಹಕ ದೇವರಾಜ್ ಅವರ ಪುತ್ರ ಅಕ್ಷಯ್ (11) ಎಂದು ತಿಳಿದು ಬಂದಿದೆ.

ಮಹಾಲಯ ಅಮವಾಸ್ಯೆ ಕಾರಣ ಕುಟುಂಬಸ್ಥರು ವಾಹನ ತೊಳೆಯಲು ಪೂಜೆ ಮಾಡುವ ಕಡೆ ಗಮನ ಕೊಟ್ಟ ಸಂದರ್ಭದಲ್ಲಿ ಅಂಬೆಗಾಲು ಇಡುತ್ತಿದ್ದ ಮಗು ಅರಿವಿಲ್ಲದೆ ತೊಟ್ಟಿಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ಬಂದಾಗ ತೊಟ್ಟಿಯಲ್ಲಿ ಮಗುವನ್ನು ನೋಡಿದ್ದಾರೆ. ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News