ಶಿವಮೊಗ್ಗ | ಬಂಧಿತ ಶಂಕಿತ ಉಗ್ರರ ಜೊತೆ ಸಂಪರ್ಕ ಹೊಂದಿರುವ ಆರೋಪ: ಮತ್ತೋರ್ವ ಯುವಕ ವಶಕ್ಕೆ?

Update: 2022-09-26 13:08 GMT

ಶಿವಮೊಗ್ಗ: ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಮತ್ತೋರ್ವನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. 

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಶಬ್ಬೀರ್ ನನ್ನು ಶಿವಮೊಗ್ಗ ವಿಶೇಷ ಪೊಲೀಸರ ತಂಡವು ವಶಕ್ಕೆ ಪಡೆದಿದೆ ಎನ್ನಲಾಗಿದೆ. 

ಬಂಧಿತ ಶಂಕಿತ ಉಗ್ರರ ಸಂಪರ್ಕ ಹೊಂದಿರುವ ಹಿನ್ನಲೆಯಲ್ಲಿ ಶಬ್ಬೀರ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ನಿಷೇಧಿತ  ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಶಾರೀಕ್  ಸಹಚರರಾದ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ (22) ಮತ್ತು ಶಿವಮೊಗ್ಗ ಸಿದ್ದೇಶ್ವರ ನಗರದ ಯಾಸಿನ್ ಅನ್ನು ಪೊಲೀಸರು ಬಂಧಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News