ಶೇ.40 ಕಮಿಷನ್ ಪಡೆಯುವ ಆರೋಪ ಹೊಂದಿರುವ ಇಲಾಖೆಗಳ ಕಚೇರಿ ಮೇಲೆ ED, IT ದಾಳಿ ಏಕಿಲ್ಲ: ಎಂ.ಬಿ.ಪಾಟೀಲ್ ಪ್ರಶ್ನೆ

Update: 2022-09-26 08:01 GMT

ಮಂಗಳೂರು, ಸೆ.26: 'ರಾಜ್ಯ ಸರಕಾರದ ಇಲಾಖೆ ಗಳಲ್ಲಿ ಶೇ 40 ಕಮಿಷನ್ ಪಡೆಯಲಾ ಗಿದೆ ಎಂದು ಗುತ್ತಿಗೆ ದಾರರು ಪ್ರಧಾನಿ ಮೋದಿಗೆ ನೀಡಿದ ದೂರಿನ  ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶ ರ ಮೂಲಕ ತನಿಖೆ ನಡೆಯಲಿ' ಎಂದು ಕೆಪಿಸಿಸಿ  ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

'ರಾಜ್ಯದಲ್ಲಿ 40 ಶೇ. ಕಮೀಷನ್ ಪಡೆಯುವ ಆರೋಪ ಹೊಂದಿರುವ  ಇಲಾಖೆಗಳ ಮೇಲೆ ಐ.ಟಿ, ಇ.ಡಿ ದಾಳಿ ಏಕೆ ನಡೆಯುತ್ತಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಜನಕ್ಕೆ ಅಚ್ಛೇದಿನ ಇತ್ತು ಈಗ ಇಲ್ಲ  ಎನ್ನುವು ದನ್ನು  ದೇಶದ ಜನ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶ ಯುವ ಜನರಿಗೆ ಭ್ರಮ ನಿರಸನ ವಾಗಿದೆ. ಸಾಕಷ್ಟು ಕಂಪೆನಿಗಳು ಖಾಸಗಿಯವರ ಪಾಲಾಗಿದೆ. ನಿರುದ್ಯೋಗದ ಪ್ರಮಾಣ ಏರಿಕೆ ಯಾಗಿದೆ. ಜನ ಸಾಮಾನ್ಯರ ನಿತ್ಯ ಬಳಕೆಯ ಪೆಟ್ರೋಲ್, ಅಡುಗೆ ಅನಿಲ, ಖಾದ್ಯ ತೈಲದ ಬೆಲೆ ಗಗನಕ್ಕೇರಿದೆ. ಮೋದಿ ವರ್ಷ ಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ಈಡೇರಿಸಿಲ್ಲ. ನೋಟ್ ಬ್ಯಾನ್ ಮೂಲಕ ಜನರನ್ನು ಸಂಕಷ್ಟಕ್ಕೀಡು ಮಾಡಿದ ಕೇಂದ್ರ ಸರ್ಕಾರ ಕೊರೋನ ಸಂದರ್ಭದಲ್ಲಿ ಕೋಟ್ಯಂತರ ಮೊತ್ತದ ಹಣ ಖರ್ಚು ಮಾಡಿದೆ ಎನ್ನುತ್ತಾರೆ. ಆದರೆ ಈ ಹಣ ಜನರಿಗೆ ತಲುಪಿಲ್ಲ' ಎಂದು ಎಂದು ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.

'ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮಕ್ಕೆ ಕಾನೂನು ಹೋರಾಟ': ಎಂ.ಬಿ.ಪಾಟೀಲ್ ವಿರುದ್ಧ ನಳಿನ್ ಕುಮಾರ್ ಕಟೀಲ್  ಮಲಪ್ರಭಾ ಕಾಲುವೆ ನಿರ್ಮಾಣ ಕ್ಕೆ ಸಂಬಂಧಿಸಿದಂತೆ ಮಾಡಿರುವ ಭೃಷ್ಟಾಚಾರದ  ಆರೋಪದ ವಿರುದ್ಧ ಅವರಿಗೆ ಕಾನೂನು ಪ್ರಕಾರ ನೋಟೀಸ್ ಜಾರಿ ಮಾಡ ಸೂಕ್ತ ಕ್ರಮಕ್ಕಾಗಿ  ಕಾನೂನು ಹೋರಾಟ ನಡೆಸುವುದಾಗಿ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್,ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ,ಮಾಜಿ ಸಚಿವರಾದ ಬಿ.ರಮಾನಾಥ ರೈ,ಅಭಯ ಚಂದ್ರ ಜೈನ್ ,ವಿನಯ ಕುಮಾರ್ ಸೊರಕೆ,ಮಾಜಿ ಶಾಸಕ ರಾದ ಶಕುಂತಳಾ ಶೆಟ್ಟಿ, ಜೆ.ಆರ್. ಲೋಬೊ, ಐವನ್ ಡಿ ಸೋಜ, ಮೊಹಿಯು ದ್ದೀನ್ ಬಾವ,ಕಾಂಗ್ರೆಸ್ ಮುಖಂಡ ರಾದ ಮಮತಾ ಗಟ್ಟಿ, ಕೃಪಾ ಅಮರ್ ಆಳ್ವ, ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News