ರಥಬೀದಿ: ಸಾರ್ವಜನಿಕ ಶಾರದಾ ಮಹೋತ್ಸವಕ್ಕೆ ಶತಮಾನೋತ್ಸವ ಸಂಭ್ರಮ

Update: 2022-09-26 10:11 GMT

ಮಂಗಳೂರು, ಸೆ.26: ನಗರದ ರಥಬೀದಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಶತಮಾನೋತ್ಸವದ ಪರ್ವ ಕಾಲದಲ್ಲಿ ಸೋಮವಾರ ಕಾಶೀಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀ ಸ್ವಾಮೀಜಿಯವರು ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿಸಿದರು.

ಈ ಪುಣ್ಯಪ್ರದ ಸಂದರ್ಭದಲ್ಲಿ ಸ್ವರ್ಣ ನವಿಲು, ಸ್ವರ್ಣ ವೀಣೆ, ಸ್ವರ್ಣ ಕೈಬಳೆ ಅಲ್ಲದೆ ಇತರ ಸ್ವರ್ಣಾಭರಣಗಳೊಂದಿಗೆ ಸರ್ವಾಲಂಕಾರಭೂಷಿತಳಾದ ಶ್ರೀ ಶಾರದಾ ಮಾತೆಗೆ ಆರತಿಯನ್ನು ಬೆಳಗಲಾಯಿತು.

ಈ ಪ್ರತಿಷ್ಠಾಪನೆಯಲ್ಲಿ ಪ್ರಧಾನ ಅರ್ಚಕ ಜೆ.ಭಾಸ್ಕರ ಭಟ್, ವೈದಿಕರಾದ ಪಂಡಿತ ಎಂ.ನರಸಿಂಹ ಆಚಾರ್ಯ, ಪಂಡಿತ ಕಾಶೀನಾಥ ಆಚಾರ್ಯ, ವೇದಮೂರ್ತಿ ವೈಕುಂಠ ಭಟ್, ಸಮಿತಿಯ ಅಧ್ಯಕ್ಷ ಡಾ.ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕಷ್ಣ ಶೆಣೈ, ಕೋಶಾಧಿಕಾರಿ ವಿಠಲ ಆಚಾರ್ಯ, ಅಲಂಕಾರ ತಂಡದ ರಘುರಾಮ ಕಾಮತ್, ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News