ವಿಶುಕುಮಾರ್ ಸಾಹಿತ್ಯ ಪ್ರಶಸ್ತಿಗೆ ಡಾ. ಬಿ.ಜನಾರ್ಧನ ಭಟ್ ಆಯ್ಕೆ

Update: 2022-09-26 14:39 GMT
ಡಾ.ಬಿ.ಜನಾರ್ಧನ ಭಟ್

ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ವತಿಯಿಂದ ಪ್ರತಿವರ್ಷ ನೀಡಲಾಗುತ್ತಿರುವ ಪ್ರತಿಷ್ಠಿತ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ವಿಮರ್ಶಕ ಹಾಗೂ ಸಾಹಿತಿ ಡಾ.ಬಿ.ಜನಾರ್ದನ ಭಟ್ ಆಯ್ಕೆಯಾಗಿದ್ದಾರೆ. ಅ.12ರಂದು ಮಾಣಿಯಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

ಡಾ.ಬಿ.ಜನಾರ್ದನ ಭಟ್ ಅವರು ಕನ್ನಡ ಸಾಹಿತ್ಯ ಲೋಕದ ಓರ್ವ ಪ್ರಸಿದ್ಧ ವಿಮರ್ಶಕ ಹಾಗೂ ಬರಹಗಾರ ರಾಗಿದ್ದು, ಈ ತನಕ ಸುಮಾರು 90 ಕ್ಕಿಂತಲೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಏಳು ಕಾದಂಬರಿಗಳು, ಆರು ಕಥಾ ಸಂಕಲನಗಳು ಜೊತೆಗೆ ಮೂವತ್ತಕ್ಕಿಂತಲೂ ಅಧಿಕ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಇಪ್ಪತ್ತೆರಡು ಅನುವಾದಿತ ಕೃತಿಗಳು ಹಾಗೂ ಇಪ್ಪತ್ತೊಂದು ಸಂಪಾದಿತ ಕೃತಿಗಳನ್ನು ಸಾಹಿತ್ಯ ಪ್ರಪಂಚಕ್ಕೆ ನೀಡಿದ್ದಾರೆ.

ಕನ್ನಡ ಸಾಹಿತ್ಯ ಪ್ರಪಂಚದ ಓರ್ವ ಪ್ರಬುದ್ಧ ಬರಹಗಾರರಾದ ಡಾ.ಬಿ.ಜನಾರ್ದನ ಭಟ್ ಅವರ ಸಮಗ್ರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯು ಈ ಬಾರಿಯ ವಿಶುಕುಮಾರ್ ಪ್ರಶಸ್ತಿಗೆ ಆಯ್ಕೆ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News