ಉಡುಪಿ ಕಲ್ಸಂಕ ಜಂಕ್ಷನ್ ಅಭಿವೃದ್ಧಿ: ಅಧಿಕಾರಿಗಳ ಜೊತೆ ಸಭೆ

Update: 2022-09-26 16:10 GMT

ಉಡುಪಿ, ಸೆ.26: ಉಡುಪಿ ಕಲ್ಸಂಕ ಜಂಕ್ಷನ್ ಬಳಿ ಅತೀ ಹೆಚ್ಚು ವಾಹನ ದಟ್ಟಣೆ ಇರುವುದರಿಂದ ವಾಹನಗಳ ಸುಸಜ್ಜಿತ ಸಂಚಾರಕ್ಕೆ ವ್ಯವಸ್ಥೆ ಹಾಗೂ ಕಲ್ಸಂಕ ಜಂಕ್ಷನ್ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕ ಕೆ.ರಘುಪತಿ ಭಟ್  ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಯಶ್ವಂತ್ ಪ್ರಭು ಹಾಗೂ ಉದ್ಯಮಿ ಜೆರ್ರಿ ಡಯಾಸ್ ಉಪಸ್ಥಿತರಿದ್ದರು.

ಕಲ್ಸಂಕ ಸರ್ಕಲ್ ಪರಿಶೀಲನೆ: ಕಲ್ಸಂಕ ಜಂಕ್ಷನ್‌ನಲ್ಲಿ ಫ್ರೀ ಲೆಫ್ಟ್ ನಿರ್ಮಿಸಲು ಮಾಂಡವಿ ಬಿಲ್ಡರ್ಸ್‌ ಸಹಕಾರ ದೊಂದಿಗೆ ಶೀಘ್ರವೇ ಕಾಮಗಾರಿ ಆರಂಭಿಸುವಂತೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶ್ವಂತ್ ಪ್ರಭು, ಉಡುಪಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News