ಶಿವಮೊಗ್ಗ : ಐವರು ಪಿಎಫ್​ಐ, ಎಸ್​ಡಿಪಿಐ ಮುಖಂಡರು ಪೊಲೀಸ್ ವಶಕ್ಕೆ

Update: 2022-09-27 05:27 GMT

ಶಿವಮೊಗ್ಗ, ಸೆ.27: ಜಿಲ್ಲೆಯಲ್ಲಿ ಎಸ್​ಡಿಪಿಐ(SDPI) ಹಾಗೂ ಪಿಎಫ್​ಐ(PFI) ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರು ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳವಾರ ಬೆಳಗಿನ ಜಾವದಲ್ಲಿ ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ ಸ್ಥಳೀಯ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.

ಎಸ್ಪಿ ಬಿ.ಎಂ.ಲಕ್ಷ್ಮಿಪ್ರಸಾದ್ ಸೂಚನೆಯಂತೆ ಭದ್ರಾವತಿಯ ಓಲ್ಡ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿರುವ ಪೊಲೀಸರು ಓರ್ವ ಎಸ್ ಡಿಪಿಐ ಹಾಗೂ ಇಬ್ಬರು ಪಿಎಫ್ಐ ಮತ್ತು ಶಿವಮೊಗ್ಗದ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಎಸ್ ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಜಿಲ್ಲೆಯಲ್ಲಿ ಶಾಂತಿ ಕದಡಬಾರದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಇವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಂಟ್ವಾಳ | ಪಿ.ಎಫ್.ಐ. ದ.ಕ. ಜಿಲ್ಲಾಧ್ಯಕ್ಷ ಸಹಿತ ಮೂವರ ಬಂಧನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News