ಪಿ.ಎಫ್.ಐ. ಕಾರ್ಯಕರ್ತರ ಮೇಲೆ ಪೊಲೀಸ್ ದಾಳಿಯಲ್ಲ, ಮುಂಜಾಗ್ರತಾ ಕ್ರಮ: ಸಿಎಂ ಬೊಮ್ಮಾಯಿ

Update: 2022-09-27 10:08 GMT

ಬೆಂಗಳೂರು, ಸೆ.27: ಪಿ.ಎಫ್.ಐ.(PFI) ಕಾರ್ಯಕರ್ತರ ಮೇಲೆ ಪೊಲೀಸ್ ನಡೆಸಿರುವುದು ದಾಳಿಯಲ್ಲ. ಪೊಲೀಸರು ಮುಂಜಾಗ್ರತಾ  ಕ್ರಮಗಳನ್ನು  ತಹಶೀಲ್ದಾರರ ಮೂಲಕ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai, Chief minister of Karnataka) ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಪೊಲೀಸರು ಹತ್ತು ಹಲವಾರು ಮಾಹಿತಿಯ ಆಧಾರದ ಮೇಲೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅದನ್ನೇ ಕರ್ನಾಟಕ ಹಾಗೂ ಎಲ್ಲಾ ರಾಜ್ಯಗಳ ಪೊಲೀಸರು ಮಾಡಿದ್ದಾರೆ. ಎಷ್ಟು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರ ಬಳಿ ಮಾಹಿತಿ ಪಡೆಯಲಾಗುವುದು ಎಂದರು.

ಇದನ್ನೂ ಓದಿ: ದ.ಕ., ಉಡುಪಿ ಜಿಲ್ಲೆಗಳ ವಿವಿಧೆಡೆ ಪೊಲೀಸ್‌ ದಾಳಿ: PFI  ಮುಖಂಡರು ವಶಕ್ಕೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News