ಶಿರಿಯಾರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ

Update: 2022-09-27 14:49 GMT

ಉಡುಪಿ, ಸೆ.27: ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಹಾಗೂ ಶಿರಿಯಾರ ಗ್ರಾಪಂಗಳ ಸಹಯೋಗದೊಂದಿಗೆ ಪೆಷಣ್ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ಶಿರಿಯಾರ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು. 

ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಕಾರ್ಯಕ್ರಮವನ್ನು  ಉದ್ಘಾಟಿಸಿದರು. ಶಿಶು ಮತ್ತು ಮಹಿಳಾ ಯೋಜನಾ ಇಲಾಖೆಯ ವಲಯ ಮೇಲ್ವಿಚಾರಕಿ ಭಾಗೀರಥಿ ಪೋಷಣ್ ಅಭಿಯಾನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮನ ಕೆ., ಪಂಚಾಯತ್ ಸದಸ್ಯರಾದ ಪ್ರದೀಪ್ ಬಲ್ಲಾಳ್, ಹರೀಶ್ ಕಾಂಚನ್, ಚಂದ್ರ ಶೆಟ್ಟಿ, ಸಂಜೀವ ಪೂಜಾರಿ, ಗಾಯತ್ರಿ, ಭಾರತಿ ಹಾಗೂ ಮೀನಾಕ್ಷಿ, ಗ್ರಾಮ ಲೆಕ್ಕಾಧಿಕಾರಿ ಶರತ್ ಶೆಟ್ಟಿ, ಆರೋಗ್ಯ ಉಪಕೇಂದ್ರದ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕರು, ಗ್ರಾಪಂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯರು ತಯಾರಿಸಿದ ವಿವಿಧ ಬಗೆಯ ಸಾಂಪ್ರಾದಾಯಿಕ ಆಹಾರ ತಿನಿಸುಗಳ ಪ್ರದರ್ಶನವೂ ನಡೆಯಿತು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News