ವಿಷ ಜಂತು ಕಡಿತದಿಂದ ವ್ಯಕ್ತಿ ಮೃತ್ಯು
Update: 2022-09-27 14:58 GMT
ಪಡುಬಿದ್ರಿ, ಸೆ.27: ಗದ್ದೆಯಲ್ಲಿ ಹುಲ್ಲು ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ವಿಷ ಜಂತು ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಸೆ.26ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಪಡುಬಿದ್ರಿ ಅಬ್ಬೇಡಿ ನಿವಾಸಿ ರಾಮ ದೇವಾಡಿಗ(60) ಎಂದು ಗುರುತಿಸಲಾಗಿದೆ.
ಇವರು ಗದ್ದೆಯಲ್ಲಿ ಹುಲ್ಲು ತೆಗೆಯುತ್ತಿರುವಾಗ ಕೈ ಬೆರಳಿಗೆ ವಿಷ ಜಂತು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಅಸ್ವಸ್ಥಗೊಂಡ ಇವರು ಚಿಕಿತ್ಸೆ ಫಲಕಾರಿಯಾಗದೆ ಮುಕ್ಕ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.