ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಧಾರ್ಮಿಕ ಕೇಂದ್ರಗಳಿಗೆ ಭೇಟಿ

Update: 2022-09-27 15:40 GMT

ಮಂಗಳೂರು, ಸೆ.27: ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ ಸೋಮವಾರ ಮಂಗಳೂರು ಆರ್ಚ್ ಬಿಷಪ್ ಹೌಸ್‌ಗೆ ಭೇಟಿ ನೀಡಿದ ಬಳಿಕ ಉಳ್ಳಾದ ಸೈಯ್ಯದ್ ಮದನಿ ದರ್ಗಾ ಹಾಗೂ ಚಿರುಂಬ ಶ್ರೀ ಭಗವತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಅಲ್ಲದೆ ನಗರದ ರಾಮಕೃಷ್ಣ ಮಠದ ಏಕಗಮ್ಯಾನಂದ ಸ್ವಾಮೀಜಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಗಳಾದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಉರ್ವಸ್ಟೋರ್ ಲಿಂಗಾಯತ ಭವನಕ್ಕೆ ಭೇಟಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News