ಬೆಳ್ತಂಗಡಿ: ದೇವಸ್ಥಾನದ ಕಾಣಿಕೆ ಹುಂಡಿಯಿಂದ ಹಣ ಕಳವು; ಆರೋಪ

Update: 2022-09-28 06:12 GMT

ಬೆಳ್ತಂಗಡಿ: ನೆರಿಯ ಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿಂದ ಹಣ ಕಳವು ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ .

ರಾತ್ರಿಯ ವೇಳೆ ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳರು ಗರ್ಭ ಗುಡಿಯ ಬೀಗ ಒಡೆದು ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ್ದಾರೆನ್ನಲಾಗಿದೆ. 

ಅಲ್ಲಿಯೇ ಸಮೀಪವಿರುವ ಫ್ಯಾನ್ಸಿ ಅಂಗಡಿಗೂ ನುಗ್ಗಿ ಕಳ್ಳತನ ನಡೆಸಿದ್ದಾರೆ ಎಂದು ದೂರಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News