ಕಾಸರಗೋಡು: ಹೊಳೆಯಲ್ಲಿ ಮುಳುಗಿ ಇಬ್ಬರು ಯುವಕರು ನಾಪತ್ತೆ

Update: 2022-09-28 14:55 GMT
ಸಾಂದರ್ಭಿಕ ಚಿತ್ರ

ಕಾಸರಗೋಡು : ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ಬುಧವಾರ ಸಂಜೆ ನಡೆದಿದೆ.

ತಿರುವನಂತಪುರದ  ರಂಜು (24) ಮತ್ತು ಕೊಲ್ಲಂ ನ ವಿಜಿತ್ (23) ಹೊಳೆಯಲ್ಲಿ ಮುಳುಗಿ ನಾಪತ್ತೆಯಾದವರು ಎಂದು ತಿಳಿದುಬಂದಿದೆ.

ಸ್ನೇಹಿತರ ಜೊತೆ ಹೊಳೆಯಲ್ಲಿ ಈಜುತ್ತಿದ್ದಾಗ ಈ  ದುರಂತ ನಡೆದಿದೆ. ಪ್ರವಾಸಕ್ಕೆಂದು ಬಂದ ತಂಡವು ಸಂಜೆ 4 ಗಂಟೆ ಸುಮಾರಿಗೆ ಪಯಸ್ವಿನಿ ಹೊಳೆಯ ಆಲೂರು ಎಂಬಲ್ಲಿ ಸ್ನಾನಕ್ಕಿಳಿದ ಸಂದರ್ಭ ಈ ಘಟನೆ ನಡೆಸಿದೆ.

ಅಗ್ನಿ ಶಾಮಕ ದಳ,  ಪೊಲೀಸರು ಹಾಗೂ ನಾಗರಿಕರು ಶೋಧ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News