ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿ; ಉಡುಪಿಯಲ್ಲಿ ಪೂರ್ವಭಾವಿ ಸಭೆ

Update: 2022-09-28 15:41 GMT

ಉಡುಪಿ, ಸೆ.28: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಈ ತಿಂಗಳ 30ರಂದು ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶಿಸಲಿದೆ.  ಈ ಐತಿಹಾಸಿಕ ಪಾದಯಾತ್ರೆಗೆ ಉಡುಪಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ಪಕ್ಷದ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ನಡೆದ ಬ್ಲಾಕ್ ಅಧ್ಯಕ್ಷರುಗಳ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಜೋಡೋ ಯಾತ್ರೆ ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನಗಳ ಕಾಲ 510 ಕಿ.ಮೀ. ಪಾದಯಾತ್ರೆಯ ಮೂಲಕ ಸಾಗಲಿದೆ. ಅ.೮ರಂದು ಜಿಲ್ಲೆಯ ೩ಸಾವಿರಕ್ಕೂ ಅಧಿಕ ಕಾರ್ಯ ಕರ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಪೂರ್ವ ತಯಾರಿ ನಡೆದಿದೆ.  ಪ್ರತೀ ಬ್ಲಾಕ್‌ನಿಂದ ಪಾದಯಾತ್ರೆ ಯಲ್ಲಿ ಭಾಗವಹಿಸುವ ಕಾರ್ಯಕರ್ತರ ಹೆಸರುಗಳನ್ನು ನೊಂದಾಯಿಸುವಂತೆ ಅವರು ಸೂಚನೆ ನೀಡಿದರು.  ಸಾರಿಗೆ ಹಾಗೂ ವಸತಿ ಸೌಕರ್ಯಗಳ ಬಗ್ಗೆ ಆಯಾ ಸಮಿತಿಗಳನ್ನು ಸಂಪರ್ಕಿಸುವಂತೆ ಮಾರ್ಗದರ್ಶನ ನೀಡಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಈ ಯಾತ್ರೆಯ ಮೂಲಕ ಬಡವ ಬಲ್ಲಿದರೆನ್ನದೆ ಸರ್ವ ಜನರನ್ನೂ ಸೆಯುವ ಉದ್ದೇಶ ಹೊಂದಿದೆ.  ಸರಕಾರದ ಕೆಟ್ಟ ಆರ್ಥಿಕ ನೀತಿ, ಬೆಲೆ ಏರಿಕೆಗಳಿಂದ ಜನ ಸಾಮಾನ್ಯನ ಜೀವನ ಮಟ್ಟ ಕುಸಿದಿದೆ.  ಬಿಜೆಪಿ ಸರಕಾರಕ್ಕೆ ಹೇಳಿಕೊಳ್ಳಲು ಯಾವುದೇ ಸಾಧನೆಗಳಿಲ್ಲ.  ಅವರ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಮುಚ್ಚಿ ಹಾಕಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಲು ಪ್ರಾರಂಭಿಸಿ ದ್ದಾರೆ.  ಬಿಜೆಪಿಯ ಈ ಷಡ್ಯಂತ್ರವನ್ನು ಜನರಿಗೆ ತಲುಪಿಸುವಲ್ಲಿ ಪಾದಯಾತ್ರೆ ಯಶಸ್ವಿಯಾಗುತ್ತಿದೆ ಎಂದರು.

ಉಡುಪಿ ಜಿಲ್ಲಾ ಉಸ್ತುವಾರಿಗಳು, ಮಾಜಿ ಸಚಿವರಾದ ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಸಂಯೋಜಕಿ ವೆರೋನಿಕಾ ಕರ್ನೇಲಿಯೋ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಹೆಚ್.ಹರಿಪ್ರಸಾದ್ ಶೆಟ್ಟಿ, ಶಂಕರ್ ಕುಂದರ್, ನವೀನ್‌ಚಂದ್ರ ಸುವರ್ಣ, ಸದಾಶಿವ ದೇವಾಡಿಗ, ರಮೇಶ್ ಕಾಂಚನ್, ಘಟಕಗಳ ಅಧ್ಯಕ್ಷರುಗಳಾದ ಸೌರಭ್ ಬಲ್ಲಾಳ್, ರೋಶನ್ ಒಲಿವರಾ, ಜಯಕುಮಾರ್, ರೋಶನ್ ಶೆಟ್ಟಿ, ಗೀತಾ ವಾಗ್ಳೆ, ಹರೀಶ್ ಶೆಟ್ಟಿ ಪಾಂಗಾಳ, ಮುಖಂಡರುಗಳಾದ ದಿನೇಶ್ ಪುತ್ರನ್, ಹಬೀಬ್ ಆಲಿ, ಕುಶಲ ಶೆಟ್ಟಿ, ಶ್ಯಾಮಲಾ ಭಂಡಾರಿ, ಮೀನಾಕ್ಷಿ ಮಾಧವ ಬನ್ನಂಜೆ, ಯತೀಶ್ ಕರ್ಕೇರ, ಅಹ್ಮದ್ , ರೊಯ್ಸ್ ಫೆರ್ನಾಂಡೀಸ್, ಉದ್ಯಾವರ ನಾಗೇಶ್ ಕುಮಾರ ಪಾಲ್ಗೊಂಡಿದ್ದರು.

ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿ, ಪ್ರಧಾನ ಕಾರ್ಯದರ್ಶಿ ಅಣ್ಣಯ್ಯ ಸೇರಿಗಾರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News