ಮಡಿಕೇರಿ | ಸಾಕಾನೆ ದಾಳಿಗೆ ಕಾರ್ಮಿಕ ಬಲಿ; ಪ್ರಾಣಾಪಾಯಾದಿಂದ ಪಾರಾದ ಮಾವುತ

Update: 2022-09-29 10:30 GMT
ಸಾಂದರ್ಭೀಕ ಚಿತ್ರ

ಮಡಿಕೇರಿ ಸೆ.29 : ಸಾಕಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಹಾಡಿ ವ್ಯಾಪ್ತಿಯಲ್ಲಿ ನಡೆದಿದೆ.

ಹಾಡಿ ನಿವಾಸಿ ಬಸಪ್ಪ (28) ಮೃತ ದುರ್ದೈವಿ.  

ಇಂದು ಬೆಳಗ್ಗೆ ಮನೆಯಿಂದ ಹೊರ ಬಂದು ನಡೆದುಕೊಂಡು ಹೋಗುತ್ತಿದ್ದಾಗ ಸಾಕಾನೆ ಏಕಾಏಕಿ ದಾಳಿ ಮಾಡಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಬಸಪ್ಪನನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಇದೇ ವೇಳೆ ಮಾವುತವೊಬ್ಬರ ಮೇಲೆಯೂ  ಸಾಕಾನೆ ದಾಳಿ ಮಾಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News