ಮೆಲ್ಕಾರ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

Update: 2022-09-29 11:10 GMT

ಬಂಟ್ವಾಳ, ಸೆ.29: ವ್ಯಕ್ತಿತ್ವ ವಿಕಸನ ನಾಯಕತ್ವ, ಶ್ರಮ, ಸಮಾಜ ಸೇವೆ, ಸಹಬಾಳ್ವೆ ಮುಂತಾದ ಗುಣ, ಅವಕಾಶಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಒದಗಿಸಿ ಕೊಡುತ್ತದೆ ಎಂದು ಮೆಲ್ಕಾರ್ ಪದವಿ ಕಾಲೇಜು  ಪ್ರಾಂಶುಪಾಲ ಬಿ.ಕೆ.ಅಬ್ದುಲ್ಲತೀಫ್ ಹೇಳಿದರು.

   ಅವರು ಮೆಲ್ಕಾರ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯೋಜನಾ ಅಧಿಕಾರಿ ಅಬ್ದುಲ್ ಮಜೀದ್ ಎಸ್. ಸ್ವಯಂಸೇವಕರ ಜವಾಬ್ದಾರಿ, ಕರ್ತವ್ಯ, ಗುರಿಯ ಬಗ್ಗೆ ಮಾಹಿತಿ ನೀಡಿದರು.

  ಮುಖ್ಯ ಅತಿಥಿಯಾಗಿ  ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಏಂಜಲಿನಾ ಸುನೀತಾ ಪಿರೇರ ಭಾಗವಹಿಸಿದ್ದರು.  ಸಹ ಯೋಜನಾಧಿಕಾರಿ ಸಂಶುನ್ನಿಸ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

 ರಾ. ಸೇ. ಯೋ. ಸ್ವಯಂ ಸೇವಕರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವಿದ್ಯಾರ್ಥಿನಿ ಅಸ್ಬಹುನ್ನಿಸ ಸ್ವಾಗತಿಸಿದರು. ಅಕ್ಮಲ್ ಸುಲ್ತಾನ ವಂದಿಸಿದರು. ಆಯಿಷಾ ಸಮ್ರಾ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News