ರಾಜಸ್ಥಾನ ಮುಖ್ಯಮಂತ್ರಿಯ ಕುರಿತು ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಿರುವ ಕಾಂಗ್ರೆಸ್‌

Update: 2022-09-29 13:55 GMT

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಒಂದು ಅಥವಾ ಎರಡು ದಿನಗಳಲ್ಲಿ ನಿರ್ಧರಿಸುತ್ತಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗುರುವಾರ ಹೇಳಿದ್ದಾರೆ.

ರಾಜಸ್ಥಾನದ ಬಿಕ್ಕಟ್ಟು ಪರಿಹರಿಸಲು ನಡೆದ ಹಲವಾರು ಸಭೆಗಳ ನಂತರ ವೇಣುಗೋಪಾಲ್ ಅವರು ಗಾಂಧಿಯವರ ಜನಪಥ್ ನಿವಾಸದ ಹೊರಗೆ ಹೇಳಿಕೆ ನೀಡಿದ್ದಾರೆ. ಉನ್ನತ ಹುದ್ದೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ನಾಳೆಯೊಳಗೆ ಯಾರು ಸ್ಪರ್ಧಿಸುತ್ತಾರೆ ಎಂಬುದು ಸ್ಪಷ್ಟವಾಗಲಿದೆ ಎಂದು ಅವರು ಹೇಳಿದರು.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ನೈತಿಕ ಹೊಣೆಗಾರಿಕೆಯನ್ನು ಹೊತ್ತುಕೊಂಡು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಬೆನ್ನಲ್ಲೇ ಈ ಹೇಳಿಕೆಗಳು ಕೇಳಿ ಬಂದಿದ್ದು, ಅವರು ಸಿಎಂ ಆಗಿ ಉಳಿಯುವ ಬಗ್ಗೆ ಪಕ್ಷದ ಮುಖ್ಯಸ್ಥರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ ನಂತರ, ಗೆಹ್ಲೋಟ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರವಿವಾರ ನಡೆದ ಬೆಳವಣಿಗೆಗಳಿಗೆ ಕ್ಷಮೆಯಾಚಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News