ಮಂಗಳೂರು: ‘ಹೃದಯಕ್ಕಾಗಿ ನಡಿಗೆ’ಕಾರ್ಯಕ್ರಮ

Update: 2022-09-29 14:16 GMT

ಮಂಗಳೂರು, ಸೆ.29: ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಯ ಕಚೇರಿ, ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ಬೈಸಿಕಲ್ ಕ್ಲಬ್ ಹಾಗೂ ಮಂಗಳೂರಿನ ಆರ್ ಸೈಕ್ಲಿಂಗ್ ಸಂಯುಕ್ತಾಶ್ರಯದಲ್ಲಿ ವಿಶ್ವ ಹೃದಯ ದಿನ-2022ರ ಅಂಗವಾಗಿ ನಗರದಲ್ಲಿ ಗುರುವಾರ ಸೈಕಲ್ ಜಾಥಾ, ಮಿಡಿತಕ್ಕಾಗಿ ತುಳಿತ ಹಾಗೂ ಹೃದಯಕ್ಕಾಗಿ ನಡಿಗೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಲಾಲ್‌ಬಾಗ್‌ನಿಂದ ಆರಂಭಗೊಂಡ ಜಾಥಾ ಪುರಭವನದಲ್ಲಿ ಸಮಾಪ್ತಿಗೊಂಡಿತು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಸಿರು ನಿಶಾನೆ ತೋರುವ ಮೂಲಕ ನಡಿಗೆಗೆ ಚಾಲನೆ ನೀಡಿದರು.

ಕೆಎಂಸಿ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿಡಾ.ಜಗದೀಶ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ., ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್‌ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ.ವಿ., ಸೈಕ್ಲಿಂಗ್ ಕ್ಲಬ್ ಅಧ್ಯಕ್ಷ ಸರ್ವೆಶ್ ಸಾಮಗ ಹಾಗೂ ಮಂಗಳೂರು ಬೈಸಿಕಲ್ ಕ್ಲಬ್‌ಅಧ್ಯಕ್ಷ ಅನಿಲ್ ಶೇರ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News