ಉಳ್ಳಾಲ: ನೂತನ ಬಿಜೆಪಿ ಕಾರ್ಯಾಲಯ ಉದ್ಘಾಟನೆ

Update: 2022-09-30 16:47 GMT

ಉಳ್ಳಾಲ: ಅಭಿವೃದ್ಧಿ ಕಾಮಗಾರಿಗಳಲ್ಲಿ ಸದಾ ತಾರತಮ್ಯ ಧೋರಣೆ ಅನುಸರಿಸುತ್ತಾ ಬರಲಾಗುತ್ತಿದೆ. ಇದನ್ನು ಅಂತ್ಯಗೊಳಿಸಲು ನಮ್ಮ ಪಕ್ಷದೊಳಗಿನ ಒಗ್ಗಟ್ಟಿನ ಮಂತ್ರವೇ ಸೂತ್ರವೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಕಾರ್ಯಕರ್ತರಿಗೆ ಕರೆ ನೀಡಿದರು.

ಪಂಡಿತ್ ಹೌಸ್ ಜಂಕ್ಷನ್ ನ ಮಾಯದೀಪ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರದಂದು ಭಾರತೀಯ ಜನತಾ ಪಕ್ಷ ಮಂಗಳೂರು ವಿಧಾನ ಸಭಾ ಕ್ಷೇತ್ರದ ನೂತನ  ಕಾರ್ಯಾಲಯವನ್ನ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಸಭಾದ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಕಸ್ತೂರಿ ಪಂಜ, ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ, ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ,ಕ್ಷೇತ್ರ ಪ್ರಮುಖರಾದ ಜಯಶ್ರೀ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಸುದರ್ಶನ್ ಅವರು‌ ಪಂಡಿತ್ ಹೌಸ್ ,ಶಿವಾಜಿ ನಗರದ ನೂತನ ಕಾಂಕ್ರಿಟ್ ಅಡ್ಡ ರಸ್ತೆ, ಬೀರಿ ಜಂಕ್ಷನ್, ಕಾಪಿಕಾಡು ಗಟ್ಟಿ ಸಮಾಜದ ಬಳಿ ಮತ್ತು ಪಂಡಿತ್ ಹೌಸಲ್ಲಿ ನೂತನವಾಗಿ ಅಳವಡಿಸಲಾದ ಹೈ ಮಾಸ್ಟ್ ದೀಪಗಳನ್ನ ಉದ್ಘಾಟಿಸಿದರು.

ಸರಕಾರದಿಂದ ದಿವ್ಯಾಂಗರಿಗೆ ನೀಡಲಾದ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News