ಚಾಮರಾಜನಗರ: ಭಾರತ್ ಜೋಡೋ ಯಾತ್ರೆಯಲ್ಲಿ 'PayCM' ಟೀಶರ್ಟ್ ಧರಿಸಿದ ಯುವಕನ ವಿರುದ್ಧ FIR

Update: 2022-10-01 05:59 GMT

ಚಾಮರಾಜನಗರ: ಶುಕ್ರವಾರ ರಾಜ್ಯದಲ್ಲಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಿಂದ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕನ ಮೇಲೆ ಎಫ್ಐಆರ್ ದಾಖಲಾಗಿದೆ.  

ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವ ಚಿತ್ರ ಇರುವ ಟೀ ಶರ್ಟ್ ಧರಿಸಿ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಶೀಘ್ರವಾಗಿ ಬಂಧಿಸಬೇಕೆಂದು ಒತ್ತಾಯಿಸಿ ಕಿರಣ್ ಎಂಬವರು ದೂರು ನೀಡಿದ್ದರು.  ಈ ಸಂಬಂಧ ಯುವಕನ ವಿರುದ್ಧ  ಚಾಮರಾಜನಗರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೋಡೋ ಯಾತ್ರೆಯಲ್ಲಿ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕ ಅಕ್ಷಯ್ ಕುಮಾರ್, ''ಯುವಕರಿಗೆ ನೌಕರಿ ಕೊಡದ 40% ಕಮಿಷನ್ ಸರ್ಕಾರವನ್ನು ಬದಲಿಸ್ತೇವೆ" ಎಂದು  ಹೇಳಿದ್ದರು.  

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News