ಭಟ್ಕಳ | ನಿಂತಿದ್ದ ಟೆಂಪೋಗೆ ಢಿಕ್ಕಿ ಹೊಡೆದ ಬಸ್: 20ಕ್ಕೂ ಹೆಚ್ಚು ಮಂದಿಗೆ ಗಾಯ

Update: 2022-10-01 07:54 GMT

ಭಟ್ಕಳ: ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹಾಗೂ ಟೆಂಪೋ ಒಂದರ ನಡುವೆ ಸಂಭವಿಸಿದ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ತಾಲೂಕಿನ ತೆರ್ನಮಕ್ಕಿ ಚರ್ಚ್ ಸಮೀಪ ನಡೆದಿದೆ.

ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಢಿಕ್ಕಿಯಾಗಿದೆನ್ನಲಾಗಿದೆ.

ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಢಿಕ್ಕಿಯ ತೀವ್ರತೆಗೆ ಬಸ್ ಮುಂಭಾಗದ ಎಡಭಾಗಕ್ಕೆ  ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರೀ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ವಿಷಯ ತಿಳಿದು ಭಟ್ಕಳ ಸಹಾಯಕ ಆಯುಕ್ತೆ  ಮಮತಾ ದೇವಿ ಜಿ.ಎಸ್ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾದ ಗೋವಿಂದ ನಾಯ್ಕ ಆಸ್ಪತ್ರೆಗೆ ಬಂದು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News