ಶ್ರಮಿಕ ಸಂಜೀವಿನಿ ಸಂಚಾರಿ ಕ್ಲಿನಿಕ್‌ಗೆ ಚಾಲನೆ

Update: 2022-10-01 16:00 GMT

ಉಡುಪಿ, ಅ.1: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವ ‘ಶ್ರಮಿಕ ಸಂಜೀವಿನಿ’ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಗೆ ಶುಕ್ರವಾರ ನಗರಸಭೆಯ ಆವರಣದಲ್ಲಿ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಪೌರಾಯುಕ್ತ ಡಾ.ಉದಯ್ ಕುಮಾರ್‌ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

ಈ ಸಂಚಾರಿ ವಾಹನವು ನವೆಂಬರ್ ೧೯ರವರೆಗೆ ನಗರದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News