ಬಸ್ ಢಿಕ್ಕಿ; ಪಾದಚಾರಿ ಮೃತ್ಯು

Update: 2022-10-01 16:29 GMT

ಬೈಂದೂರು, ಅ.1: ರಸ್ತೆ ಬದಿಯಲ್ಲಿ ಬಸ್‌ಗಾಗಿ ಕಾಯುತಿದ್ದ ಹಿರಿಯ ನಾಗರಿಕರೊಬ್ಬರಿಗೆ ವೇಗವಾಗಿ ಬಂದ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ  ತೀವ್ರವಾಗಿ ಗಾಯಗೊಂಡ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಜಂಕ್ಷನ್ ಬಳಿ ರಾ.ಹೆದ್ದಾರಿ 66ರಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಆನಂದ ಶೆಟ್ಟಿ (70) ಎಂದು ಗುರುತಿಸಲಾಗಿದೆ. ಬೆಳಗ್ಗೆ 9.20ರ ಸುಮಾರಿಗೆ ಇವರು ಬಸ್‌ಗಾಗಿ ರಸ್ತೆ ಬದಿ ಕಾದು ನಿಂತಿದ್ದಾಗ, ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಧಾವಿಸಿದ ಬಂದ ಖಾಸಗಿ ಬಸ್‌ನ ಚಾಲಕ ಬಸ್‌ನ್ನು ತೀರಾ ಎಡಭಾಗಕ್ಕೆ ಚಲಾಯಿಸಿ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆಗೆ ಸ್ಪಂಧಿಸದೇ ಅಪರಾಹ್ನ ೩ಗಂಟೆಗೆ ಮೃತಪಟ್ಟರು.  ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News