ಮಂಗಳೂರು: ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಗಾಂಧಿ ಜಯಂತಿ, ಪ್ರಶಸ್ತಿ ಪ್ರದಾನ
Update: 2022-10-01 16:44 GMT
ಮಂಗಳೂರು, ಅ.1; ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಆಶ್ರಯದಲ್ಲಿ ಗಾಂಧಿ ಜಯಂತಿ ಕಾರ್ಯ ಕ್ರಮವು ಸೆ.2 ರಂದು ಬೆಳಗ್ಗೆ 9.30 ಗಂಟೆಗೆ ಧ್ವಜಾರೋಹಣ ದೊಂದಿಗೆ ಆರಂಭಗೊಳ್ಳಲಿದ್ದು,10 ಗಂಟೆಗೆ ಎ.ಸದಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯ ಕ್ರಮವು ನಡೆಯಲಿದೆ.
ಮಂಗಳೂರಿನ ಖ್ಯಾತ ವೈದ್ಯರಾದ ಬಿ.ಶ್ರೀನಿವಾಸ ಕಕ್ಕಿಲ್ಲಾಯ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ದುಡಿಯುವ ಮಕ್ಕಳ ಅಂತರಾಷ್ಟ್ರೀಯ ಸಂಸ್ಥೆ 'ನಮ್ಮಭೂಮಿ' ಯ ರಾಯಭಾರಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ.ಕನ್ನಡ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ' ರಾಮಾಂಜಿ ನಮ್ಮ ಭೂಮಿ 'ಅವರಿಗೆ 'ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವರ್ಷದ ವ್ಯಕ್ತಿ2022' ಪ್ರಶಸ್ತಿ ನೀಡಿ ಗೌರವಿಸಲಾಗುವುದು. ರಾಮಕೃಷ್ಣ ಮಿಷನ್ ನ ವಿದ್ಯಾರ್ಥಿಗಳು ಮತ್ತು ಬಲ್ಮಠ ಸರಕಾರಿ ಪ್ರಥಮ ದರ್ಜೆಯ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಪ್ರೇಮವನ್ನು ಬಿಂಬಿಸುವ ಕಾರ್ಯ ಕ್ರಮಗಳನ್ನು ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.