ವಕ್ಫ್ ಆಸ್ತಿಗಳ ಸಂರಕ್ಷಣೆ ಅತ್ಯಗತ್ಯ : ನಾಸಿರ್ ಲಕ್ಕಿಸ್ಟಾರ್

Update: 2022-10-01 17:12 GMT

ಸುಳ್ಯ: ವಕ್ಫ್ ಇಲಾಖೆಗೆ ಸೇರಿದ ಆಸ್ತಿಗಳನ್ನು ಮುಂದಿನ ತಲೆಮಾರಿಗೆ ಹಸ್ತಾಂತರ ಮಾಡಬೇಕಾದ ಅನಿವಾ ರ್ಯತೆ ಇರುವುದರಿಂದ ಆಸ್ತಿಗಳನ್ನು ಸಂರಕ್ಷಿಸುವ ಅತ್ಯಗತ್ಯ ಇದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್ ಹೇಳಿದರು.

ದ ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಸುಳ್ಯ ತಾಲೂಕು ಜಮಾಅತ್ ಸಮನ್ವಯ ಸಮಿತಿ ಆಶ್ರಯದಲ್ಲಿ ಸುಳ್ಯದ ನಾವೂರಿನ ಅನ್ಸಾರಿಯ ಸಭಾಂಗಣದಲ್ಲಿ ವಕ್ಫ್ ಇಲಾಖೆ, ಅಕಂದಾಯ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕಾರ್ಮಿಕ ಇಲಾಖೆ, ಅರೋಗ್ಯ ಇಲಾಖೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಅಲ್ಪ ಸಂಖ್ಯಾತರ ಆಯೋಗದ ಅಹವಾಲು ಸ್ವೀಕಾರ ಹಾಗು ಮಾದಕ ದ್ರವ್ಯ ವಿರೋಧಿ ಜಾಗೃತಿ ಆಂದೋಲನ ಕಾರ್ಯಕ್ರಮ ಅಧ್ಯಕ್ಷತೆ ಮಾತನಾಡಿದರು. 

ಸುಳ್ಯ ತಹಸೀಲ್ದಾರ್ ಅನಿತಾ ಲಕ್ಷ್ಮಿ ವಿವಿಧ ಇಲಾಖೆಗಳ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯರಾದ ಟಿ.ಎಂ.ಶಹೀದ್ ತೆಕ್ಕಿಲ್, ಎಸ್.ಸಂಶುದ್ದೀನ್, ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಸಿರಾಜುದ್ದೀನ್, ಜಾವಗಲ್ ದರ್ಗಾ ಶರೀಫ್ ಅಧ್ಯಕ್ಷ ಪಿ.ಇಸಾಕ್ ಸಾಹೇಬ್ ಪಾಜಪಳ್ಳ, ನಗರ ಪಂಚಾಯಿತಿ ಸದಸ್ಯರಾದ ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ.ಹಮೀದ್, ತಾ.ಪಂ.ಮಾಜಿ ಸದಸ್ಯ ಅಬ್ದುಲ್ ಗಫೂರ್, ಅನ್ಸಾರುಲ್ ಮುಸ್ಲಿಮಿನ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಶುಕೂರ್, ಸುನ್ನಿ ಮಹಲ್ ಫೆಡರೇಶನ್ ಅಧ್ಯಕ್ಷ ಎಸ್.ಎ. ಹಮೀದ್, ಸುಳ್ಯ ತಾಲೂಕು ಜಮೀಯತುಲ್ ಫಲಾಹ್ ಅಧ್ಯಕ್ಷ ಹಸೈನಾರ್ ಹಾಜಿ ಗೋರಡ್ಕ, ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ದ.ಕ.ಜಿಲ್ಲಾ ಕೆ.ಎಂ.ಸಿ.ಸಿ. ಕೋಶಾಧಿಕಾರಿ ಇಬ್ರಾಹಿಂ ಕತ್ತರ್, ವಕೀಲರಾದ ಅಬೂಬಕ್ಕರ್ ಅಡ್ಕಾರ್, ಫವಾಝ್ ಕನಕಮಜಲು, ಕೆಪೆಕ್ ಮಾಜಿ ನಿರ್ದೇಶಕ ಪಿ.ಎ.ಮಹಮ್ಮದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಇಬ್ರಾಹಿಂ ಗೂನಡ್ಕ, ಅಬ್ಬಾಸ್ ಸಂಟ್ಯಾರ್ ಅತಿಥಿಗಳಾಗಿದ್ದರು.‌

ಕಾವು ಮಾಡನ್ನೂರಿನ ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ಪ್ರಿನ್ಸಿಪಾಲ್ ಹನೀಫ್ ಹುದವಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕುರಿತು ಮಾತನಾಡಿದರು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ನಂದಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಆರೋಗ್ಯ ಮಿತ್ರ ಮುರಳಿ ಚೊಕ್ಕಾಡಿ, ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ಗಣಪತಿ ಹೆಗ್ಡೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮಂಜುನಾಥ್, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಯಶೋಧರ, ದ.ಕ.ಜಿಲ್ಲಾ ವಕ್ಫ್ ಅಧಿಕಾರಿ ಮುಅಝಮ್ ಭಾಗವಹಿಸಿ ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಸ್ವಾಗತ ಸಮಿತಿ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ಸ್ವಾಗತಿಸಿ, ಜಿಲ್ಲಾ ವಕ್ಫ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ರಹ್ಮಾನ್ ಮೊಗರ್ಪಣೆ ವಂದಿಸಿದರು. ಸಮನ್ವಯ ಸಮಿತಿ ಸಂಚಾಲಕ ಕೆಎಂ ಮುಸ್ತಫ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News