ಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ ಸ್ವಚ್ಛ ಭಾರತ ಅಂಗವಾಗಿ ಸೈಕಲ್ ಜಾಥಾ

Update: 2022-10-02 14:45 GMT

ಕಾರ್ಕಳ: ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜನ್ಮದಿನದ ಅಂಗವಾಗಿ ಸ್ವಚ್ಛ ಕಾರ್ಕಳ ಬ್ರಿಗೇಡ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸೈಕ್ಲಿಂಗ್ ಕ್ಲಬ್  ವತಿಯಿಂದ ಸ್ವಚ್ಛತೆಯ ಕುರಿತು ಸಾರ್ವಜನಿಕ ರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ  ಸೈಕಲ್ ಜಾತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಣಿರಾಜ ಶೆಟ್ಟಿ ಸೈಕಲ್ ಜಾಥಾಗೆ ಹಸಿರು ನಿಶಾನೆ ತೋರಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಬೇಕು, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೂಡ ತಮ್ಮ ಮನೆಯ ಪರಿಸರದ ಸ್ವಚ್ಛತೆ ಕಾಪಾಡಿದರೆ ಸ್ವಚ್ಛ ಭಾರತದ ಪರಿಕಲ್ಪನೆ ಯಶಸ್ವಿಯಾ ಗಲು ಸಾಧ್ಯ ಎಂದರು. ಕಾರ್ಕಳ ಬಸವಣ್ಣ ವೃತ್ತದಿಂದ ಎಸ್ ಕೆ ಬಾರ್ಡರ್ ವರೆಗೆ ಸೈಕಲ್ ಜಾಥಾ ನಡೆಯಿತು ‌

ಈ ಸಂದರ್ಭ ವನ್ಯಜೀವಿ ವಿಭಾಗದ ಡಿಎಫ್ಓ ಗಣಪತಿ, ಪ್ರೊಬೆಷನರಿ ಎಸಿಎಫ್ ಕಾಜೋಲ್ ಅಜಿತ್ ಪಾಟೀಲ್, ಉಡುಪಿ ಸೈಕ್ಲಿಂಗ್ ಕ್ಲಬ್ ಅಧ್ಯಕ್ಷ ಡಾ. ಗುರುಪ್ರಸಾದ್, ಮಂಗಳೂರು ಸೈಕ್ಲಿಂಗ್ ಕ್ಲಬ್ ಅಧ್ಯಕ್ಷ ಡಾ. ಅಶ್ವಥ್ ಸ್ವಚ್ಛಕಾರ್ಕಳ ಬ್ರಿಗೇಡ್ ಸದಸ್ಯರಾದ ವಿಪುಲ್ ತೇಜ್,ಫೆಲಿಕ್ಸ್ ಮುಂತಾದವರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News