ಉಡುಪಿ ಜಿಲ್ಲಾ ಜೆಡಿಎಸ್ನಿಂದ ಗಾಂಧಿ ಜಯಂತಿ
ಉಡುಪಿ, ಅ.2: ಉಡುಪಿ ಜಿಲ್ಲಾ ಜಾತ್ಯತೀತ ಜನತಾ ಪಕ್ಷದ (ಜೆಡಿಎಸ್) ವತಿಯಿಂದ ಗಾಂಧಿ ಜಯಂತಿಯನ್ನು ಉಡುಪಿ ಜಿಲ್ಲಾ ಪಕ್ಷದ ಕಚೇರಿ ಯಲ್ಲಿ ಇಂದು ಆಚರಿಸಲಾಯಿತು.
ಮಹಾತ್ಮಾ ಗಾಂಧಿಜೀ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಗೈದು ಮಾತನಾಡಿದ ಜಿಲ್ಲಾಧ್ಯಕ್ಷ ಯೋಗೀಶ ವಿ ಶೆಟ್ಟಿ, ಗಾಂಧೀಜಿ ಅವರ ಜೀವನವೇ ಒಂದು ಆದರ್ಶ. ನುಡಿದಂತೆ ನಡೆದು ತನ್ನ ಜೀವನವನ್ನು ಅದೇ ರೀತಿಯಲ್ಲಿ ಅನುಕರಣೆ ಮಾಡಿದ ಒಂದು ಮಹಾನ್ ವ್ಯಕ್ತಿ. ಅವರು ನಮ್ಮೆಲ್ಲರಿಗೂ ಆದರ್ಶ ಎಂದರು.
ಇಂದಿನ ಕಲುಷಿತ ವಾತಾವರಣದಲ್ಲಿ ಅವರ ಅಹಿಂಸಾ ತತ್ವ, ಜಾತ್ಯಾತೀತ ನಿಲುವು, ನಮ್ಮ ದೇಶಕ್ಕೆ, ರಾಜ್ಯಕ್ಕೆ ತುಂಬಾ ಅಗತ್ಯ ಇದೆ. ಇದನ್ನು ನಾವೆಲ್ಲರೂ ಅನುಸರಿಸೋಣ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ, ವಾಸುದೇವ ರಾವ್, ಜಯರಾಮ ಆಚಾರ್ಯ, ಗಂಗಾಧರ ಬಿರ್ತಿ, ಜಯಕುಮಾರ ಪರ್ಕಳ, ಇಸ್ಮಾಯಿಲ್ ಪಲಿಮಾರು, ವೆಂಕಟೇಶ್ ಎಂ ಟಿ, ಬಿ.ಕೆ.ಮೊಹಮ್ಮದ್, ದೇವರಾಜ್, ಯು.ಎ.ರಶೀದ್, ರಂಗಾ ಕೋಟ್ಯಾನ್ ಮತ್ತು ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು.