‘ಭಾರತ್ ಜೋಡೋ’ ಪಾದಯಾತ್ರೆಯಲ್ಲಿ ಭಾಗಿಯಾಗಲು ರಾಜ್ಯಕ್ಕೆ ಸೋನಿಯಾ ಗಾಂಧಿ ಭೇಟಿ
Update: 2022-10-02 17:58 GMT
ಬೆಂಗಳೂರು: ‘ಭಾರತ್ ಜೋಡೋ’ ಪಾದಯಾತ್ರೆಯಲ್ಲಿ ಭಾಗಿಯಾಗಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು, ಗುರುವಾರ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ನಾಳೆ (ಅ.3) ರಾಜ್ಯಕ್ಕೆ ಆಗಮಿಸಲಿರುವ ಸೋನಿಯಾ ಗಾಂಧಿ ಎರಡು ದಿನ ಕೊಡಗಿನಲ್ಲಿ ತಂಗಲಿದ್ದು, ಗುರುವಾರ ಮಂಡ್ಯದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಪ್ರಿಯಾಂಕಾ ಗಾಂಧಿ ಕೂಡಾ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿದ್ದಾಗಿ ವರದಿಯಾಗಿದೆ.