ಅಕ್ಕಿ ಅಕ್ರಮ ಸಾಗಾಟ ಸೇರಿ 30ಕ್ಕೂ ಹೆಚ್ಚು ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರು

Update: 2022-10-03 06:21 GMT

ಕಲಬುರಗಿ: ಅಕ್ರಮವಾಗಿ ಅಕ್ಕಿ ಸಾಗಾಟ, ಕ್ರಿಮಿನಲ್ ಚಟುವಟಿಕೆ ಸೇರಿದಂತೆ 30ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗೆ ಕಲಬುರಗಿ ಪೊಲೀಸರು ಒಂದು ವರ್ಷ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಮಣಿಕಂಠ ರಾಠೋಡ್ ವಿರುದ್ಧ ನಿರಂತರ ಪ್ರಕರಣ ದಾಖಲಾಗುತ್ತಿದ್ದು, ಕೋರ್ಟ್ ನಿಂದ ಜಾಮೀನು ಪಡೆದು ಮತ್ತೆ ಅದೇ ಕ್ರಿಮಿನಲ್ ಕೃತ್ಯದಲ್ಲಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಒಂದು ವರ್ಷ ಗಡಿಪಾರು ಮಾಡಿ ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರತಿದಿನ ಠಾಣೆಗೆ ಹೋಗಿ ಸಹಿ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News