ಮಂಗಳೂರು: ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳ ಸೆರೆ

Update: 2022-10-04 11:33 GMT

ಮಂಗಳೂರು, ಅ.3: ನಗರದಲ್ಲಿ ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂದರು ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

ಎಸ್ಸೈ ನಾಗರಾಜ ಎಸ್. ರವಿವಾರ ಮುಂಜಾವ 3ಕ್ಕೆ ಕುದ್ರೋಳಿ ಅಳಕೆ ಮಾರ್ಕೆಟ್ ಬಳಿ ಸಿಬ್ಬಂದಿಯೊಂದಿಗೆ ಗಸ್ತು ನಿರತರಾಗಿದ್ದ ವೇಳೆ ಇಬ್ಬರು ಅನುಮಾನಾಸ್ಪದವಾಗಿ ಕಂಡು ಬಂದಿದ್ದು, ತಕ್ಷಣ ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೋಡಿಕಲ್ ಸಮೀಪದ ಅಶೋಕ ನಗರದ ಪ್ರಮೋದ್‌ರಾಜ್ (46) ಮತ್ತು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಓಂಕಾರ್ ಮೂರ್ತಿ (49) ಎಂದು ಪರಿಚಯಿಸಿಕೊಂಡಿದ್ದಾರೆ.

ಮುಂಜಾವ ಕಳವು ಅಥವಾ ಬೇರೆ ಯಾವುದೋ ಕೃತ್ಯ ಮಾಡುವ ಉದ್ದೇಶದಿಂದ ಹೊಂಚು ಹಾಕುತ್ತಿದ್ದ ಬಗ್ಗೆ ಸಂಶಯ ಬಂದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News