ಅ.4ರಂದು ಹುಬ್ಬುರ್ರಸೂಲ್ ಕಾನ್ಫರೆನ್ಸ್

Update: 2022-10-03 16:45 GMT

ದೇರಳಕಟ್ಟೆ: ಎಸ್ಸೆಸ್ಸೆಫ್ ಮತ್ತು ಎಸ್ ವೈ ಎಸ್ ಮಂಜನಾಡಿ ಸೆಕ್ಟರ್ ಇದರ ಆಶ್ರಯದಲ್ಲಿ ಹುಬ್ಬು ರಸೂಲ್ ಕಾನ್ಫರೆನ್ಸ್ ಅ.4ರಂದು ಸಂಜೆ 4.30ಕ್ಕೆ  ಮಂಜನಾಡಿಯ ಮೈಸೂರು ಗ್ರೌಂಡ್ ನ ಪಯಶ್ವಿ ಉಸ್ತಾದ್ ವೇದಿಕೆ ಯಲ್ಲಿ ನಡೆಯಲಿದೆ.

ಸೆಯ್ಯದ್ ಶರಫುದ್ದೀನ್ ಅಲ್ ಹೈದ್ರೋಸ್ ತಂಙಳ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಹ್ಸನಿ ಮಂಜನಾಡಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News