ರೈತರ ಚಳುವಳಿ ಭಾರತ ಐಕ್ಯತಾ ಯಾತ್ರೆಗೆ ದೊಡ್ಡ ಸ್ಫೂರ್ತಿ: ರಾಹುಲ್ ಗಾಂಧಿ

Update: 2022-10-04 14:46 GMT

ಬೆಂಗಳೂರು: ಭಾರತ ಐಕ್ಯತಾ ಯಾತ್ರೆ ಮಾಡಲು ನಿರ್ಧರಿಸಿದಾಗ  ರೈತರ ಚಳುವಳಿ ದೊಡ್ಡ ಸ್ಫೂರ್ತಿಯಾಗಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಅವರು,'ಅನ್ನದಾತರಿಗೆ ನ್ಯಾಯ ಒದಗಿಸದೆ ಈ ಹೋರಾಟ ಕೊನೆಗೊಳ್ಳುವುದಿಲ್ಲ' ಎಂದಿದ್ದಾರೆ.

''ವರ್ಷ ಕಳೆದರೂ ಲಖೀಂಪುರ ಖೇರಿಯ ಹುತಾತ್ಮ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕಾರಣ ಒಂದೇ - ಬಿಜೆಪಿ ಯಾವಾಗಲೂ ಅಪರಾಧಿಗಳನ್ನು ರಕ್ಷಿಸುತ್ತಿದೆ. ನಾವು #ಭಾರತಐಕ್ಯತಾಯಾತ್ರೆ ಮಾಡಲು ನಿರ್ಧರಿಸಿದಾಗ, ರೈತರ ಚಳುವಳಿ ನಮಗೆ ದೊಡ್ಡ ಸ್ಫೂರ್ತಿಯಾಗಿತ್ತು. ಅನ್ನದಾತರಿಗೆ ನ್ಯಾಯ ಒದಗಿಸದೆ ಈ ಹೋರಾಟ ಕೊನೆಗೊಳ್ಳುವುದಿಲ್ಲ'' ಎಂದು ತಿಳಿಸಿದ್ದಾರೆ.

ಮೈಸೂರು ಜಿಲ್ಲೆ ಪ್ರವೇಶಿಸಿರುವ  ಭಾರತ್‌ ಜೋಡೊ ಪಾದಯಾತ್ರೆಗೆ 2 ದಿನ ಬಿಡುವು ನೀಡಲಾಗಿದ್ದು, ಅ.6ರಂದು ಮಂಡ್ಯದ ಪಾಂಡವಪುರದಿಂದ ಪಾದಯಾತ್ರೆ ಪುನರಾರಂಭಗೊಳ್ಳಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News