ಕೋವಿಡ್ ಸೋಂಕು ಹಿನ್ನೆಲೆ ದಸರಾ ಕಾರ್ಯಕ್ರಮಗಳಿಗೆ ರಾಜ್ಯಪಾಲರು ಗೈರು: ಸಿಎಂ ಬೊಮ್ಮಾಯಿ

Update: 2022-10-04 16:09 GMT

ಮೈಸೂರು: ಮೈಸೂರು ದಸರಾ ಈ ಬಾರಿ ಅದ್ದೂರಿ, ಅರ್ಥಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಆಯುಧ ಪೂಜೆ, ಜಂಬೂ ಸವಾರಿ ನಡೆಯಲಿದೆ.  ಕೋವಿಡ್ ಕಾರಣದಿಂದಾಗಿ ನಮ್ಮ ಗೌರವಾನ್ವಿತ ರಾಜ್ಯಪಾಲರು ಭಾಗವಹಿಸುತ್ತಿಲ್ಲ ಎಂದು ತಿಳಿಸಿದರು.

'ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸತ್ ಸದಸ್ಯರು ಯೋಜನಾಬದ್ಧವಾಗಿ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಚರಣೆ ಮಾಡಿದ್ದಾರೆ. ಅವರಿಗೆ ಮತ್ತು ನಾಡಿನ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ‌ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News