ಮತಾಂತರ ಆಗುವವರಿಗೆ ಮೀಸಲಾತಿ ಸಿಗಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

Update: 2022-10-05 14:57 GMT

ಚಿಕ್ಕಮಗಳೂರು, ಅ.5: ಹಿಂದೂ ಧರ್ಮದ ರಕ್ಷಣೆಯೊಂದಿಗೆ ದಲಿತದ ಹಿತ ರಕ್ಷಣೆಯ ಉದ್ದೇಶದಿಂದ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಮತಾಂತರ ಆಗುವವರಿಗೆ ಮೀಸಲಾತಿ ಸಿಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳವಾರ ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಹಿಂದೂ ಜಾಗೃತ ಸಮಿತಿ ಹಮ್ಮಿಕೊಂಡಿದ್ದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಗೆ ಹಲವು ವರ್ಷಗಳಿಂದ ಬೇಡಿಕೆ ಇತ್ತು. ಹಾಲಿ ಬಿಜೆಪಿ ಸರಕಾರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಕಾಯ್ದೆಯನ್ನು ಜಾರಿಗೆ ತರುವಲ್ಲಿ ಸರಕಾರ ಯಶಸ್ವಿಯಾಗಿದೆ ಎಂದರು.

''ಸರಕಾರಿ ಕೆಲಸದಲ್ಲಿರುವ ನೌಕರರಿಂದ ಹಿಡಿದು ಸಾಮಾನ್ಯ ದಲಿತರು ಮತಾಂತರ ಆದಲ್ಲಿ ಮೀಸಲಾತಿ ಅವರಿಗೆ ಸಿಗುವುದಿಲ್ಲ'' ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News