ಮೀಲಾದುನ್ನೆಬಿ ಹಿನ್ನೆಲೆ; ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

Update: 2022-10-07 14:28 GMT

ಬೆಳ್ಳಾರೆ: ಮೀಲಾದುನ್ನೆಬಿ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿಸಭೆ ಶುಕ್ರವಾರ ನಡೆಯಿತು.

ಸಭೆಯು ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ರವರ ನೇತೃತ್ವದಲ್ಲಿ ನಡೆಯಿತು. ಠಾಣಾಧಿಕಾರಿ ಮಾತನಾಡಿ, ಶಾಂತಿಯುತವಾಗಿ ಹಬ್ಬವನ್ನು ಆಚರಿಸಿ, ಯಶಸ್ವಿಯಾಗಿ ನಡೆಯಲಿ ಎಂದು ಕರೆ ನೀಡಿದರು ಹಾಗೂ ಈ ಸಂದರ್ಭದಲ್ಲಿ ಅಹಿತಕರ ಘಟನೆಗೆ ಎಡೆಯಾದರೆ ತಕ್ಷಣ ಠಾಣೆಗೆ ಮಾಹಿತಿ ನೀಡಿ ಸಹಕರಿಸಿ ಎಂದರು. ಸಭೆಯಲ್ಲಿ ಠಾಣೆ ವ್ಯಾಪ್ತಿಗೊಳಪಟ್ಟ ಮಸೀದಿಯ  ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News