ಹಾಸನ: ತಮ್ಮನ ಮೃತದೇಹ ನೋಡಿ ಹೃದಯಾಘಾತದಿಂದ ಅಣ್ಣ ಮೃತ್ಯು

Update: 2022-10-07 18:35 GMT
ಸಾಂದರ್ಭಿಕ ಚಿತ್ರ

ಹಾಸನ: ತಮ್ಮನ ಮೃತದೇಹ ನೋಡಿ ಸಹೋದರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿ ಬಾಗೀವಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ವಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಗುರುವಾರ ರಾತ್ರಿ ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪ್ರವೀಣ್ (28) ಮತ್ತು ಆಟೋ ಚಾಲಕನಾಗಿದ್ದ ರಾಜ (30) ಮೃತಪಟ್ಟ ಯುವಕರು.

ಬೆಂಗಳೂರಿನಿಂದ ಬಂದಿದ್ದ ಮೃತಪಟ್ಟ ರಾಜ ಅವರ ಅಣ್ಣ ಮಧು (37)  ತಮ್ಮನ ಶವ ನೋಡಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ‌ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News