ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ

Update: 2022-10-08 14:17 GMT

ಬೆಂಗಳೂರು, ಅ.8: ಗೃಹಣಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಸಿಂಗನಾಯಕನ ಹಳ್ಳಿಯಲ್ಲಿ ಈ ಪ್ರಕರಣ ನಡೆದಿದ್ದು, ಆರತಿ (34) ಮೃತ ಮಹಿಳೆ ಎಂದು ತಿಳಿದುಬಂದಿದೆ.

ಆರತಿ ಮತ್ತು ಚೇತನ್ 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಅಂತರ್ ಜಾತಿ ವಿವಾಹವಾಗಿದ್ದರಿಂದ ಇಬ್ಬರು ಸಿಂಗನಾಯಕನ ಹಳ್ಳಿಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು. ಆದರೆ ಶುಕ್ರವಾರ ಆರತಿ ವಾಸವಾಗಿದ್ದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ

ಚೇತನ್  ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ಪೋಷಕರು ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News