×
Ad

ಆದಿಕವಿ ಪುರಸ್ಕಾರ ಮತ್ತು ವಾಗ್ದೇವಿ ಪ್ರಶಸ್ತಿ ಪ್ರಕಟ

Update: 2022-10-09 19:18 IST
ಡಾ. ಬಾಬು ಕೃಷ್ಣಮೂರ್ತಿ (Photo: Facebook)

ಬೆಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ 2021 ಮತ್ತು 2022ನೇ ಸಾಲಿನ ‘ಆದಿಕವಿ ಪುರಸ್ಕಾರ’ ಹಾಗೂ ‘ವಾಗ್ದೇವಿ ಪ್ರಶಸ್ತಿ’ಗಳನ್ನು ಪ್ರಕಟಿಸಿದೆ. 2021ನೇ ಸಾಲಿನ ‘ಆದಿಕವಿ ಪುರಸ್ಕಾರ'ಕ್ಕೆ ಸಾಹಿತಿ ಡಾ. ಬಾಬು ಕೃಷ್ಣಮೂರ್ತಿ ಹಾಗೂ 2022ನೇ ಸಾಲಿಗೆ ಸಾಹಿತಿ ಅಂಕೋಲಾದ ಪುಟ್ಟು ಪರಶುರಾಮ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.

2021ನೇ ಸಾಲಿನ ‘ವಾಗ್ದೇವಿ ಪ್ರಶಸ್ತಿ'ಗೆ ಸಂಸ್ಕೃತ ವಿದ್ವಾಂಸ ಶೃಂಗೇರಿಯ ಡಾ. ವಿಶ್ವನಾಥ ಸುಂಕನಾಳ ಮತ್ತು 2022ನೇ ಸಾಲಿಗೆ ಲೇಖಕ ರೋಹಿತ್ ಚಕ್ರತೀರ್ಥ ಅವರನ್ನು ಆಯ್ಕೆ ಮಾಡಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಪ್ರಶಸ್ತಿಗಳನ್ನು ವಿತರಣೆ ಮಾಡಲಿಲ್ಲ. ಹೀಗಾಗಿ ಎರಡು ವರ್ಷಗಳ ಪ್ರಶಸ್ತಿಗಳಿಗೆ ಇದೀಗ ಆಯ್ಕೆ ಮಾಡಲಾಗಿದೆ. ಪುರಸ್ಕಾರ ಹಾಗೂ ಪ್ರಶಸ್ತಿಯು ತಲಾ ಒಂದು ಲಕ್ಷ ನಗದು, ಸನ್ಮಾನ ಪತ್ರ, ವಾಲ್ಮೀಕಿ ಮಹರ್ಷಿ ಮತ್ತು ಸರಸ್ವತಿ ವಿಗ್ರಹಗಳನ್ನು ಒಳಗೊಂಡಿದೆ. ಪ್ರಶಸ್ತಿಗಳನ್ನು ಅ.16ರಂದು ತುಮಕೂರಿನ ಸಿದ್ದಗಂಗಾ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಪ್ರದಾನ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News