ಬೆಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪತ್ನಿಯನ್ನು ಹತ್ಯೆಗೈದ ಪತಿ

Update: 2022-10-10 13:37 GMT

ಬೆಂಗಳೂರು, ಅ.10: ಮದ್ಯದ ಅಮಲಿನಲ್ಲಿ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಲೆಗೈದು ಪತಿಯೊರ್ವ ಪರಾರಿಯಾಗಿರುವ ಘಟನೆ ಇಲ್ಲಿನ ನೆಲಮಂಗಲ ತಾಲೂಕಿನ ಶಾಂತಿನಗರ ಗ್ರಾಮದಲ್ಲಿ ವರದಿಯಾಗಿದೆ.

ಶಾಂತಿನಗರದ ಮಂಜುಳಾ(35) ಕೊಲೆಯಾದ ಮಹಿಳೆಯಾಗಿದ್ದು, ಕೃತ್ಯವೆಸಗಿದ ಪತಿ ಶಿವಕುಮಾರ್(45) ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News