ಮುಲಾಯಂ ಅಂತ್ಯಕ್ರಿಯೆಗೆ ರಾಹುಲ್ ತೆರಳುವುದಿಲ್ಲ; ಭಾರತ್ ಜೋಡೋ ಯಾತ್ರೆ ಮುಂದುವರಿಯಲಿದೆ: ಡಿಕೆಶಿ

Update: 2022-10-11 04:15 GMT

ಬೆಂಗಳೂರು, ಅ.11: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿಗದಿ ಆಗಿರುವಂತೆ ಮುಂದುವರಿಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನಾಳೆ ಯಾತ್ರೆ ಸ್ಥಗಿತಗೊಳಿಸಿ ತೆರಳಲಿದ್ದಾರೆ ಎಂಬುದು ಕೇವಲ ವದಂತಿ. ಅವರು ಇಲ್ಲೇ ಇದ್ದು ಯಾತ್ರೆ ಮುಂದುವರಿಸುವರು ಎಂದು ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News